ADVERTISEMENT

ಪ್ರಜಾವಾಣಿಯಲ್ಲಿ 50 ವರ್ಷಗಳ ಹಿಂದೆ: ಭಾನುವಾರ, 9-5-1971

​ಪ್ರಜಾವಾಣಿ ವಾರ್ತೆ
Published 22 ಮೇ 2021, 19:31 IST
Last Updated 22 ಮೇ 2021, 19:31 IST
   

ಬಾಂಗ್ಲಾದೇಶ ನಿರಾಶ್ರಿತರಿಗೆ ಎಲ್ಲ ನೆರವು: ಜೆ.ಪಿ.ಗೆ ಟಿಟೋ ಆಶ್ವಾಸನೆ

ಬೆಲ್ಗ್ರೇಡ್‌, ಮೇ 22– ಗಡಿದಾಟಿ ಭಾರತಕ್ಕೆ ಬಂದಿರುವ ಬಾಂಗ್ಲಾದೇಶದ ನಿರಾಶ್ರಿತರಿಗೆ ಸಾಧ್ಯವಾದ ಎಲ್ಲ ನೆರವು ನೀಡುವುದಾಗಿ ಯಗೋಸ್ಲಾವಿಯ ಅಧ್ಯಕ್ಷ ಟಿಟೋ ಅವರು ತಮ್ಮನ್ನು ಭೇಟಿ ಮಾಡಿದ ಸರ್ವೋದಯ ನಾಯಕ ಜಯಪ್ರಕಾಶ್‌ ನಾರಾಯಣ್‌ ಅವರಿಗೆ ಆಶ್ವಾಸನೆ ನೀಡಿದ್ದಾರೆ.

ಪೂರ್ವ ಬಂಗಾಳದಲ್ಲಿಯ ಪರಿಸ್ಥಿತಿ ಬಗ್ಗೆ ತೀವ್ರ ಆತಂಕವನ್ನೂ ಯಗೋಸ್ಲಾವಿಯ ಅಧ್ಯಕ್ಷರು ವ್ಯಕ್ತಪಡಿಸಿದ್ದಾರೆ. ಶ್ರೀ ಜಯಪ್ರಕಾಶ್‌ ನಾರಾಯಣ್‌, ಯುಗೋಸ್ಲಾವಿಯ ಅಧ್ಯಕ್ಷರನ್ನು ಭೇಟಿಯಾಗಿ ಐವತ್ತು ನಿಮಿಷಗಳ ಕಾಲ ಮಾತನಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.