
ಪ್ರಜಾವಾಣಿ ವಾರ್ತೆ
ಕೆಜಿಎಫ್, ಅ. 28– ಕುಖ್ಯಾತ ರೌಡಿ ತಂಗಂನ ಸಹೋದರರು ನಿನ್ನೆ ರಾತ್ರಿಯಿಂದ ಇಂದು ಮಧ್ಯಾಹ್ನದವರೆವಿಗೆ ನಡೆಸಿದ ಹಲ್ಲೆ ಹಾಗೂ ದಾಂಧಲೆಗಳಿಂದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಈ ಸಂಬಂಧ ಇಂದು ಇಲ್ಲಿ ಉದ್ರಿಕ್ತ ಪರಿಸ್ಥಿತಿ ಉಂಟಾಗಿದೆ.
ಇತ್ತೀಚೆಗೆ ಪೊಲೀಸರ ಗುಂಡಿಗೆ ಬಲಿಯಾದ ಕುಖ್ಯಾತ ರೌಡಿ ತಂಗಂನ ತಾಯಿ ಪವಳಿ ಮೇಲೆ ವಿರೋಧಿ ಗುಂಪೊಂದು ಹಲ್ಲೆ ಮಾಡಿ ತೀವ್ರವಾಗಿ ಗಾಯಗೊಳಿಸಿತ್ತು. ತಾಯಿ ಮೇಲೆ ನಡೆದ ಹಲ್ಲೆಗೆ ಪ್ರತೀಕಾರವಾಗಿ ದಾಂಧಲೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.