ADVERTISEMENT

ಅದಾಲತ್‌ ನಡೆಸಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 3 ಮಾರ್ಚ್ 2014, 19:30 IST
Last Updated 3 ಮಾರ್ಚ್ 2014, 19:30 IST

ಬೆಂಗಳೂರಿನ ಗ್ರಾಮಾಂತರ ಪ್ರದೇಶಗಳಲ್ಲಿ ಒಂದಾದ ಅಂದ್ರಹಳ್ಳಿಯ ಎರಡನೇ ಹಂತದಲ್ಲಿರುವ ವಿದ್ಯಾಮಾನ್ಯನಗರ ಮತ್ತು ಸುತ್ತಮುತ್ತ ಅನೇಕ ಬಡಾವಣೆಗಳಿದ್ದು, ಜನಸಂಚಾರ ಹೆಚ್ಚಾಗಿದೆ.

ಪೀಣ್ಯ ಎರಡನೇ ಹಂತಕ್ಕೆ ಹೋಗುವ ಹಾದಿಯಲ್ಲಿರುವುದರಿಂದ ಬಸ್‌ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಸಂಚಾರದಟ್ಟಣೆ ಹೆಚ್ಚಾಗಿದ್ದು ಅನಗತ್ಯ ತೊಂದರೆ ಅನುಭವಿಸುವಂತಾಗಿದೆ. ಇದಕ್ಕೆ ಪರಿಹಾರವಾಗಿ ಹೇರೋಹಳ್ಳಿಯಿಂದ ವಿದ್ಯಾಮಾನ್ಯನಗರಕ್ಕೆ ಹೋಗಲು ಸೌಂದರ್ಯ ರಸ್ತೆಯಲ್ಲಿ ಏಕಮುಖ ಸಂಚಾರ ಕಲ್ಪಿಸಿಕೊಡಬೇಕಾಗಿದೆ.

ಜನರ ಸಮಸ್ಯೆಗಳನ್ನು ಪತ್ರಿಕೆಗಳಲ್ಲಿ ಎಷ್ಟು ಬರೆದರೂ ಪ್ರಯೋಜನವಾಗಿಲ್ಲ. ಇಲ್ಲಿ ಅದಾಲತ್‌ ಸೌಲಭ್ಯವನ್ನು ಕಲ್ಪಿಸಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕ್ರಮ ಕೈಗೊಳ್ಳುವ ಅಗತ್ಯವಿದೆ. ಸಂಬಂಧಪಟ್ಟವರು ಕೂಡಲೇ ಸ್ಪಂದಿಸಬೇಕಾಗಿ ಮನವಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.