ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆಯಿಂದ ಅಂಜನಾಪುರದ ಕಡೆ ಹೋಗುವ ಕೆಂಬತ್ತಳ್ಳಿ ಮುಖ್ಯ ರಸ್ತೆಯಲ್ಲಿ ಹಲವಾರು ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ಸ್ಥಳೀಯರೇ ಹಾಕಿಕೊಂಡಿರುತ್ತಾರೆ.
ಈ ಎಲ್ಲಾ ರಸ್ತೆ ಉಬ್ಬುಗಳ ನಡುವಿನ ಅಂತರ ಅತಿ ಕಡಿಮೆಯಾಗಿದೆ. ಇದರಿಂದಾಗಿ ಆ ರಸ್ತೆಯಲ್ಲಿ ಸಂಚರಿಸುವ ವಾಹನ ಚಾಲಕರಿಗೆ, ಸವಾರರಿಗೆ ಭಾರಿ ತೊಂದರೆಯಾಗುತ್ತಿದೆ.
ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಈ ರಸ್ತೆ ಉಬ್ಬುಗಳನ್ನು ತೆರವುಗೊಳಿಸಿ ಸುಗಮಸಂಚಾರಕ್ಕೆ ವ್ಯವಸ್ಥೆ ಮಾಡಬೇಕೆಂದು ನನ್ನ ಮನವಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.