ADVERTISEMENT

ಅವ್ಯವಸ್ಥೆ ತಪ್ಪಿಸಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2016, 19:30 IST
Last Updated 11 ಜುಲೈ 2016, 19:30 IST

ಸಂಚಾರಿ ದಟ್ಟಣೆ ತಪ್ಪಿಸುವ ಉದ್ದೇಶದಿಂದ ಹೊಸಕೋಟೆ ಮುಖ್ಯ ಬಸ್‌ ನಿಲ್ದಾಣವನ್ನು ಚನ್ನಬೈರೇಗೌಡ ಕ್ರೀಡಾಂಗಣದ ಬಳಿಗೆ ಬದಲಾಯಿಸಿ ತಿಂಗಳುಗಳೇ ಕಳೆದಿದೆ. ಆದರೆ ರಾಷ್ಟ್ರೀಯ ಹೆದ್ದಾರಿಯ ಮಧ್ಯದಲ್ಲೇ ಬಸ್‌ ನಿಲ್ದಾಣವನ್ನು ಮಾಡಿರುವ ಕಾರಣ ರಸ್ತೆ ಮಧ್ಯೆ ಬಸ್‌ಗಳು ನಿಲ್ಲುತ್ತವೆ.

ಜೊತೆಗೆ ನೂರು ಮೀಟರ್‌ ದೂರದಲ್ಲೇ ಪೊಲೀಸ್‌ ಠಾಣೆ ಇದ್ದು, ಅಪಘಾತಕ್ಕೊಳಗಾದ ವಾಹನಗಳನ್ನು ರಸ್ತೆ ಮೇಲೆ ನಿಲ್ಲಿಸಲಾಗಿದೆ. ಇದರಿಂದಾಗಿ ರಸ್ತೆ ದಾಟುವವರಿಗೆ ತುಂಬಾ ತೊಂದರೆಯಾಗಿದೆ. ಸಂಬಂಧಪಟ್ಟವರು ಈ ಕೂಡಲೇ ಈ ಸಮಸ್ಯೆ ನಿವಾರಿಸಬೇಕಾಗಿ ವಿನಂತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.