ADVERTISEMENT

ಅಸಹಾಯಕತೆ ತರವಲ್ಲ

ಪ್ರಹ್ಲಾದ್ ವಾ.ಪತ್ತಾರ
Published 12 ಜೂನ್ 2018, 19:08 IST
Last Updated 12 ಜೂನ್ 2018, 19:08 IST

‘ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಹೋದರೆ ಕರ್ಚಿಗೆ ಕುತ್ತು ಬರಬಹುದು’ ಎಂಬ ಅಸಹಾಯಕತೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಯೇ ಹೀಗೆ ಹೇಳಿದರೆ ಜನರ ಗತಿ ಏನು?

ಕುಮಾರಸ್ವಾಮಿ ಅವರು ಕುರ್ಚಿಗೆ ಕಟ್ಟು ಬಿಳದೇ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವ ಧೈರ್ಯ ತೋರಿಸಬೇಕು. ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು.

ಎಲ್ಲಾ ಇಲಾಖೆಗಳಿಗೆ ಡಿಜಿಟಲ್ ಸ್ಪರ್ಶ ನೀಡಿದರೆ ಕೆಳ ಹಂತದ ಬಹುಪಾಲು ಭ್ರಷ್ಟಾಚಾರ ನಿಯಂತ್ರಣವಾಗುತ್ತದೆ. ಮುಖ್ಯಮಂತ್ರಿ ಈ ನಿಟ್ಟಿನಲ್ಲಿ ಚಿಂತಿಸಬೇಕೇ ವಿನಾ ಅಸಹಾಯಕತೆಯ ಮಾತನಾಡುವುದು ತರವಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.