ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕಕ್ಕೆ ಒಂದು ರೀತಿಯಲ್ಲಿ ಅತಿಥಿ ಮುಖ್ಯಮಂತ್ರಿ ಎನಿಸಿದ್ದಾರೆ. ಏಕೆಂದರೆ ಅವರು ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಕಾಳಜಿಯನ್ನು ವಹಿಸುತ್ತಿಲ್ಲ. ಈ ಭಾಗದಲ್ಲಿ ನಡೆಯುವ ಬಹುತೇಕ ಔಪಚಾರಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದನ್ನು ಬಿಟ್ಟರೆ ಇಲ್ಲಿನ ಅಭಿವೃದ್ಧಿಗೆ ಆಸಕ್ತಿ ತೋರಿಸುತ್ತಿಲ್ಲ.
ಇದು ಒಟ್ಟಾರೆ ಸರ್ಕಾರದ ಮಲತಾಯಿ ಧೋರಣೆಯನ್ನು ತೋರಿಸುತ್ತದೆ. ಒಂದು ದೊಡ್ಡ ರಾಜ್ಯದ ಮುಖ್ಯಮಂತ್ರಿಯಾದವರು ಅಭಿವೃದ್ಧಿ ವಿಚಾರದಲ್ಲಿ ಸಮತೋಲನ ಸಾಧಿಸಬೇಕು. ಅವರು ಇನ್ನಾದರೂ ಬೆಂಗಳೂರು, ಮೈಸೂರು ಬಿಟ್ಟು ಹೊರಬರಬೇಕು. ಇದಕ್ಕಾಗಿಯೇ ಪಾಟೀಲ ಪುಟ್ಟಪ್ಪನವರು ಎನ್.ಕೆ ಅಂದರೆ ನಾರ್ಥ್ ಕರ್ನಾಟಕ ಅಲ್ಲ ನೆಗ್ ಲೆಕ್ಟೆಡ್ ಕರ್ನಾಟಕ ಎಂದು ಹೇಳುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.