ಮೌಂಟ್ ಎವರೆಸ್ಟ್ ಏರಿ ಸಾಹಸ ಮೆರೆಯುವ ವಿದ್ಯಾರ್ಥಿಗಳಿಗೆ ವೃತ್ತಿನಿರತ ಪದವಿ ಕೋರ್ಸ್ಗಳಿಗೆ ಸಿಇಟಿ ಮೂಲಕ ಪ್ರವೇಶ ಪಡೆಯಲು ಅನುವಾಗುವಂತೆ ವೃತ್ತಿ ಶಿಕ್ಷಣ ಸಂಸ್ಥೆಗಳ ನಿಯಮಗಳಿಗೆ ತಿದ್ದುಪಡಿ ತಂದಿರುವ ವಿಚಾರ ಕೇಳಿ ಸಂತೋಷವಾಯಿತು. ಈ ನಿರ್ಧಾರದಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಎನ್ಸಿಸಿ ಸೇರಲು ಸಾಧ್ಯವಾಗುತ್ತದೆ.
ಈ ಮೂಲಕ, ದೇಶದ ರಕ್ಷಾಕವಚವಾಗಿರುವ ಸೇನಾ ಪಡೆಗಳಿಗೆ ಸೇರಲು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಿದಂತಾಗುತ್ತದೆ. ಎನ್ಸಿಸಿ ಸೇರಿ ವಿವಿಧ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ವೃತ್ತಿಶಿಕ್ಷಣದಲ್ಲಿ ಮಾತ್ರವಲ್ಲದೆ, ಉದ್ಯೋಗದಲ್ಲೂ ಮೀಸಲಾತಿ ನೀಡಲು ಸರ್ಕಾರ ಮುಂದಾಗಬೇಕು.
–ಯೋಗೇಶ್ ವೈ.ಸಿ., ಮಂಡ್ಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.