ADVERTISEMENT

ಏಕೆ ಬಂತು ಈ ಬುದ್ಧಿ?

ಚನ್ನು ಅ.ಹಿರೇಮಠ ರಾಣಿಬೆನ್ನೂರು
Published 18 ಏಪ್ರಿಲ್ 2018, 19:30 IST
Last Updated 18 ಏಪ್ರಿಲ್ 2018, 19:30 IST

ಅಂಬೇಡ್ಕರ್ ಜಯಂತಿಯನ್ನು ದೇಶದೆಲ್ಲೆಡೆ ಇತ್ತೀಚೆಗೆ ಆಚರಿಸಲಾಯಿತು. ಅಂಬೇಡ್ಕರ್ ಪ್ರತಿಮೆಗೆ ಸವರ್ಣೀಯರು, ಕೆಲವು ರಾಜಕೀಯ ಪಕ್ಷಗಳ ಮುಖಂಡರು–ಕಾರ್ಯಕರ್ತರು ಮಾಲಾರ್ಪಣೆ ಮಾಡಿ ಅಪವಿತ್ರಗೊಳಿಸಿದ್ದಾರೆ ಎಂದು ದಲಿತ ಸಂಘಟನೆಗಳವರು ಆ ಪ್ರತಿಮೆಗಳಿಗೆ ಕೆಲವು ಕಡೆ ಹಾಲು- ನೀರಿನ ಅಭಿಷೇಕ ಮಾಡಿದ್ದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ಹಿಂದೆ ರಾಜಕೀಯ ಪಕ್ಷದ ಕಾರ್ಯಕರ್ತರು ಮಾಡಿದ ಕೆಲಸವನ್ನೇ ಈಗ ದಲಿತ ಸಂಘಟನೆಗಳ ಕಾರ್ಯಕರ್ತರು ಮಾಡಹೊರಟಿದ್ದು ಸಮರ್ಥನೀಯವೇ? ಅನುಕರಣೆ ಯಾವುದರಲ್ಲಿ ಎನ್ನುವುದನ್ನು ಆಲೋಚಿಸುವ ಸಮಯ ಇದಾಗಿದೆ!

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT