ಕನ್ನಡದಲ್ಲಿ ಪ್ರತೀ ವರ್ಷ ಸಾವಿರಾರು ಪುಸ್ತಕಗಳು ಪ್ರಕಟವಾಗುತ್ತಿರುವ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿರುವ ವಿಮರ್ಶಕ ಸಿ.ಎನ್. ರಾಮಚಂದ್ರನ್ ಅವರು, ‘ಓದುಗರು ಪುಸ್ತಕ ಕೊಂಡು ಓದದಿದ್ದರೆ ಅಷ್ಟೊಂದು ಏಕೆ ಮುದ್ರಣ ಆಗುತ್ತವೆ ಹೇಳಿ? ಹೊಸ ಕೃತಿಗಳು ಬಂದಷ್ಟೂ ಕನ್ನಡ ಸಾಹಿತ್ಯ ಶ್ರೀಮಂತ ಆಗುತ್ತದೆ’ ಎಂದಿದ್ದಾರೆ.
ಹಿರಿಯ ಪ್ರಕಾಶಕರ ಮತ್ತು ಮಾರಾಟ ಕ್ಷೇತ್ರದಲ್ಲಿರುವವರ ಪ್ರಕಾರ ಭಾರೀ ಸಂಖ್ಯೆಯಲ್ಲಿ ಪುಸ್ತಕಗಳು ಪ್ರಕಟವಾಗುವುದು ಗ್ರಂಥಾಲಯಗಳಿಗೆ ಪುಸ್ತಕ ಖರೀದಿ ಮಾಡುವ ಯೋಜನೆಯ ಲಾಭ ಪಡೆಯುವ ಉದ್ದೇಶದಿಂದ ಹೊರತು ಕನ್ನಡ ಸಾಹಿತ್ಯವನ್ನು ಶ್ರೀಮಂತ ಗೊಳಿಸುವ ಉದ್ದೇಶದಿಂದ ಖಂಡಿತಾ ಅಲ್ಲ. ಇದು ಎಲ್ಲರಿಗೂ ಗೊತ್ತಿರುವ ವಿಷಯ.
–ಅಂಕಿತಾ, ಬೆಂಗಳೂರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.