

ಜೆ.ಪಿ.ನಗರ 2ನೇ ಹಂತದಲ್ಲಿರುವ ದೇವಿ ದೇವಸ್ಥಾನದ ಹಿಂಭಾಗದಲ್ಲಿರುವ ಆವರಣದಲ್ಲಿ ಪ್ಲಾಸ್ಟಿಕ್, ಕೊಳೆತ ತರಕಾರಿ, ಹೂವಿನ ಮಾಲೆಗಳನ್ನು ಎಸೆದಿದ್ದು, ಅವು ಅಲ್ಲೆ ಕೊಳೆತು ದುರ್ನಾತ ಬೀರುತ್ತಿದೆ. ದೇವಾಲಯಕ್ಕೆ ಸಮೀಪವಿರುವ ಈ ಕಸದ ರಾಶಿಯಿಂದ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ತೊಂದರೆ ಅನುಭವಿಸುವಂತಾಗಿದೆ.
ಈಗ ಮಳೆಗಾಲ ಆರಂಭವಾಗಿದೆ. ಅಲ್ಲಿನ ಕಸದ ರಾಶಿಯನ್ನು ಹಾಗೆಯೇ ಬಿಟ್ಟರೆ ಅದು ಮಲೇರಿಯಾ ಹಾಗೂ ಮತ್ತಿತರ ರೋಗಗಳನ್ನು ಹರಡಲು ಕಾರಣವಾಗಬಹುದು. ಆದ್ದರಿಂದ ಆದಷ್ಟು ಬೇಗ ಈ ಕಸದ ರಾಶಿಯನ್ನು ತೆರವುಗೊಳಿಸಿ ಈ ಜಾಗವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರ ಆರೋಗ್ಯ ಕಾಪಾಡಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.