ಅಂತರರಾಷ್ಟ್ರೀಯ ಮನ್ನಣೆ ಗಳಿಸಿದ್ದ ಇಂಗ್ಲಿಷ್ ಸಾಹಿತ್ಯ ದಿಗ್ಗಜ ಆರ್. ಕೆ. ನಾರಾಯಣ್ ಅವರ ಮೈಸೂರು ಮನೆಯನ್ನು ಸಾಂಸ್ಕೃತಿಕ ಕೇಂದ್ರವಾಗಿ ಸರ್ಕಾರವೇ ಮುಂದೆನಿಂತು ಅಭಿವೃದ್ಧಿಪಡಿಸಿರುವುದು ಶ್ಲಾಘನೀಯ.
ಅದೇ ರೀತಿ ಕನ್ನಡದ ಮಹಾಕವಿ ಕುವೆಂಪು ಅವರ ಮೈಸೂರು ಮನೆಯನ್ನು `ಆದರ್ಶ ಜೀವನ~ದ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿಪಡಿಸುವ ಅಗತ್ಯವಿದೆ.
ಕುವೆಂಪು ಅವರ ಹುಟ್ಟೂರು ಕುಪ್ಪಳಿಯ ಮನೆಯನ್ನು ಸರ್ಕಾರ ಸ್ಮಾರಕವಾಗಿ ಅಭಿವೃದ್ಧಿ ಪಡಿಸಿದೆ. ಅವರ ಮೈಸೂರಿನ ಮನೆ ಅವರ ಸಾಹಿತ್ಯ ರಚನೆಗೆ ಪ್ರೇರಣೆ ನೀಡಿದ ತಾಣ. ಉದಯ ರವಿಯನ್ನು `ಜೀವನ ಪ್ರೇರಣಾ ಕೇಂದ್ರ~ವನ್ನಾಗಿ ಅಭಿವೃದ್ಧಿಪಡಿಸಬೇಕೆಂಬ ಬೇಡಿಕೆಯನ್ನು ಸಹಾನುಭೂತಿಯಿಂದ ಪರಿಶೀಲಿಸಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.