ADVERTISEMENT

ಕೆಪಿಎಸ್ಸಿ ಅಲ್ಲ ಇಸ್ಸೀ!

ವಿವೇಕ ಆರ್.ಬೆಂಗಳೂರು
Published 25 ಸೆಪ್ಟೆಂಬರ್ 2013, 19:59 IST
Last Updated 25 ಸೆಪ್ಟೆಂಬರ್ 2013, 19:59 IST

ಕರ್ನಾಟಕ ಲೋಕ ಸೇವಾ ಆಯೋಗದ ಕೊಳೆ ಪೂರ್ತಿ ತೊಳೆದುಬಿಡಿ ಎಂದು ಮುಖ್ಯಮಂತ್ರಿಗೆ ಸಲಹೆ ನೀಡಿ ಪ್ರಜಾವಾಣಿ ಖಡಕ್ ಸಂಪಾದಕೀಯ ಬರೆದು (ಸೆ ೨೩) ಶ್ಲಾಘನೀಯ ಕೆಲಸ ಮಾಡಿದೆ. ಈಚೆಗೆ ನಿಮ್ಮ ಪತ್ರಿಕೆಯಲ್ಲಿ ಪ್ರಕಟವಾದ ಸರಣಿ ಲೇಖನ ಓದಿದ ಮೇಲಂತೂ ಕೆಪಿಎಸ್‌ಸಿ ಅಂದರೆ ಇಸ್ಸೀ! ಎನ್ನುವಂತಾಗಿದೆ.

ಕೊಳೆತೊಳೆಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಅದೆಷ್ಟು ಪ್ರಾಮಾಣಿಕವಾಗಿ ಮಾಡುತ್ತದೆ ಎಂಬುದನ್ನು ಆಧರಿಸಿಯೇ ನಾವೆಲ್ಲ ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ಯಾವ ಪಕ್ಷಕ್ಕೆ ಮತ ಹಾಕಬೇಕು ಎಂಬುದನ್ನು ನಿರ್ಧರಿಸಬೇಕಿದೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.