ರಾಜರಾಜೇಶ್ವರಿನಗರ ವಲಯದ ಲಗ್ಗೆರೆ ಮುಖ್ಯ ರಸ್ತೆಯನ್ನು ವಿವಿಧ ಸಂದರ್ಭದಲ್ಲಿ ಅಗೆದು ಗುಂಡಿಗಳ ತಾಣವನ್ನಾಗಿ ಮಾಡಿಬಿಟ್ಟಿದ್ದಾರೆ. ಇದರಿಂದ ಮಳೆಗಾಲದಲ್ಲಿ ಅಲ್ಲಲ್ಲಿ ನೀರಿನ ಸಣ್ಣ ಸಣ್ಣ ಕೆರೆಗಳು ನಿರ್ಮಾಣವಾಗುತ್ತವೆ. ಇದರಿಂದ ಬಿಎಂಟಿಸಿ ಬಸ್ಸುಗಳು ಹೊಸ ಬಸ್ಸು ನಿಲ್ದಾಣಕ್ಕೆ ಬರುವುದನ್ನೇ ನಿಲ್ಲಿಸಿಬಿಟ್ಟಿವೆ. ಈ ಮುಖ್ಯರಸ್ತೆಯಲ್ಲಿ ನಾಗರಿಕರು ನಡೆದುಕೊಂಡು ಹೋಗುವುದೂ ತುಂಬಾ ಕಷ್ಟಕರವಾಗಿದೆ.
ಈಗಲಾದರೂ ಬಿಬಿಎಂಪಿ ಆಯುಕ್ತರಾಗಲಿ, ನೂತನ ಶಾಸಕರಾಗಲಿ, ಲೋಕಸಭಾ ಸದಸ್ಯರಾಗಲಿ ಸೂಕ್ತ ಕ್ರಮ ಕೈಗೊಂಡು ಲಗ್ಗರೆ ಮುಖ್ಯರಸ್ತೆಗೆ ಡಾಂಬರೀಕರಣ ಮಾಡಿಸಿಕೊಡುತ್ತಾರೆಂದು ಆಶಿಸೋಣವೇ?
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.