ADVERTISEMENT

ಗಿಡಗಂಟೆ ತೆರವುಗೊಳಿಸಿ

ಜಕ್ಕೂರು ಎಸ್.ನಾಗರಾಜು
Published 23 ಡಿಸೆಂಬರ್ 2013, 19:30 IST
Last Updated 23 ಡಿಸೆಂಬರ್ 2013, 19:30 IST

ಯಲಹಂಕ ದೊಡ್ಡಬಳ್ಳಾಪುರ ರಸ್ತೆಯನ್ನು ಬಿ.ಎಂ.ಎಸ್‌. ಕಾಲೇಜಿನವರೆಗೂ ಅಭಿವೃದ್ಧಿಪಡಿಸಿದ್ದು ರಸ್ತೆಯ ಎರಡೂ ಬದಿಯಲ್ಲಿ ಪಾದಚಾರಿ ಪಥಕ್ಕೆ ಟೈಲ್ಸ್ ಅಳವಡಿಸಿರುತ್ತಾರೆ. ಆದರೆ ಒಂದು ಬದಿಯ ಪಾದಚಾರಿ ರಸ್ತೆಯಲ್ಲಿ ಗಿಡ, ಬಳ್ಳಿಗಳು ಬೆಳೆದು ಜನರು ಈ ರಸ್ತೆಯಲ್ಲಿ ಸಂಚರಿಸದ ಸ್ಥಿತಿ ನಿರ್ಮಾಣವಾಗಿದೆ.

ವಾಹನಗಳು ಸಂಚರಿಸುವ ರಸ್ತೆಯಲ್ಲೇ ಓಡಾಡಬೇಕಾಗಿದೆ. ಇದರಿಂದ ರಸ್ತೆ ಅಪಘಾತಗಳಾಗುವ ಸಂಭವವಿದೆ. ಆದ್ದರಿಂದ ಸಂಬಂಧಪಟ್ಟ ಬಿಬಿಎಂಪಿ ಅಧಿಕಾರಿಗಳು ರಸ್ತೆಬದಿಯ ಗಿಡ–ಗಂಟೆಗಳನ್ನು ತೆರವು ಮಾಡಿ ಪಾದಚಾರಿಗಳ ಸುಗಮ ಓಡಾಟಕ್ಕೆ ಅನುವು ಮಾಡಿಕೊಡಬೇಕು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.