ADVERTISEMENT

ಗ್ರಾಮಲೆಕ್ಕಿಗರ ನೇಮಕಾತಿ ಅವೈಜ್ಞಾನಿಕ

​ಪ್ರಜಾವಾಣಿ ವಾರ್ತೆ
Published 15 ಜುಲೈ 2012, 19:30 IST
Last Updated 15 ಜುಲೈ 2012, 19:30 IST

 ರಾಜ್ಯದ ನಾನಾ ಜಿಲ್ಲೆಯ ಗ್ರಾಮ ಲೆಕ್ಕಿಗರ ಹುದ್ದೆಗೆ ಅವೈಜ್ಞಾನಿಕ ರೀತಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.  

  ಇಂತಹ ಸ್ಪರ್ಧಾತ್ಮಕ ಯುಗದಲ್ಲಿ ಲಕ್ಷಾಂತರ ಸ್ಪರ್ಧಾತ್ಮಕ ಅಭ್ಯರ್ಥಿಗಳ ಪ್ರತಿಭೆಯನ್ನು ಬದಿಗೊತ್ತಿ, ಕೇವಲ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಗ್ರಾಮಲೆಕ್ಕಿಗರ ಹುದ್ದೆಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಇಂತಹ ಅವೈಜ್ಞಾನಿಕ ನಿಯಮದಿಂದ ಈ ಹುದ್ದೆಗೆ ಸಮರ್ಥ, ಪ್ರತಿಭಾವಂತ, ಕ್ರಿಯಾಶೀಲ ಅಭ್ಯರ್ಥಿಯ ನೇಮಕ ಅಸಾಧ್ಯ. ಆದ್ದರಿಂದ ಶೀಘ್ರವಾಗಿ ಗ್ರಾಮಲೆಕ್ಕಿಗರ ನೇಮಕಾತಿ ನಿಯಮಕ್ಕೆ ತಿದ್ದುಪಡಿ ತಂದು, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ನೀತಿ ಜಾರಿಗೆ ತಂದು, ರಾಜ್ಯದ ಲಕ್ಷಾಂತರ ಪ್ರತಿಭಾವಂತ ನಿರುದ್ಯೋಗಿ ಯುವಕರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.