ADVERTISEMENT

ಜಾತಿ ಅಸಹನೆಯ ಪರಮಾವಧಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2012, 19:30 IST
Last Updated 18 ಮಾರ್ಚ್ 2012, 19:30 IST

ದಲಿತ ಯುವಕನನ್ನು ಪ್ರೀತಿಸಿ ವಿವಾಹವಾದ ಕಾಲೇಜು ಉಪನ್ಯಾಸಕಿಯನ್ನು ಆಕೆಯ ಅಣ್ಣನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಅತ್ಯಂತ ಅಮಾನವೀಯವಾದುದು.

ಉನ್ನತ ಶಿಕ್ಷಣ ಪಡೆದ ಉಪನ್ಯಾಸಕಿ ಶ್ರುತಿ ಅವರಿಗೆ ತಮ್ಮ ಜೀವನ ಸಂಗಾತಿಯನ್ನು ಆರಿಸಿಕೊಳ್ಳುವ ಹಕ್ಕು ಇಲ್ಲವೇ? ಈ ಕಾಲದಲ್ಲೂ ವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ಅದಕ್ಕಾಗಿ ಹತ್ಯೆ ಮಾಡುವ ಘಟನೆಗಳು ನಡೆಯುತ್ತಿರುವುದು ದುರದೃಷ್ಟಕರ.

ಹನ್ನೆರಡನೇ ಶತಮಾನದಲ್ಲೇ ಬಸವಣ್ಣನವರೇ ಇಂತಹ ಅಂತರ್ಜಾತೀಯ ವಿವಾಹಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದರು.  ಅದು ಮುಂದುವರಿಯಬೇಕು. ಮುಂದುವರಿದ ಜಾತಿಯ ಯುವಕರಲ್ಲಿ ಜಾತಿ ಅಸಹನೆ ಹೆಚ್ಚುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ.

ಪ್ರಗತಿಪರ ಸಂಘಟನೆಗಳು, ಮಠಾಧೀಶರು ಅಂತರ್ಜಾತೀಯ ವಿವಾಹ, ವಿಧವಾ ವಿವಾಹಗಳು ಅವಮಾನ ಎನ್ನುವ ಮನೋಭಾವ ಹೋಗಲಾಡಿಸಲು ಶ್ರಮಿಸುವ ಅಗತ್ಯವಿದೆ. ಇದು ತುರ್ತಾಗಿ ಆಗಬೇಕಾದ ಕೆಲಸ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.