ADVERTISEMENT

ತಜ್ಞರಿಂದ ತಪಾಸಣೆ ಮಾಡಿಸಿ

ಗೌರಿಬಿದನೂರು ರಂಗಪ್ಪ
Published 23 ಡಿಸೆಂಬರ್ 2013, 19:30 IST
Last Updated 23 ಡಿಸೆಂಬರ್ 2013, 19:30 IST

ವಿರೂಪಾಕ್ಷಪುರ (ಕೊಡಿಗೇಹಳ್ಳಿ) ಮಾರಮ್ಮನ ದೇವಸ್ಥಾನದ ಪಕ್ಕದಲ್ಲಿ ನೂರಾರು ವರ್ಷಗಳಷ್ಟು ಹಳೆಯದಾದ ಅಶ್ವತ್ಥ ವೃಕ್ಷವಿದೆ. ಇದರ ಕಾಂಡವೇನೋ ದೊಡ್ಡ ಗಾತ್ರದಲ್ಲಿದ್ದು, ಒಂದೊಂದು ರೆಂಬೆ ಕೊಂಬೆಗಳೂ ಒಂದೊಂದು ಮರದಂತಿವೆ. ಇವು ರಸ್ತೆಯ ನಾಲ್ಕೂ ಕಡೆಗೂ ಮುಗಿಲು ಮುಟ್ಟುವಂತೆ ಚಾಚಿಕೊಂಡಿವೆ. ಮರದ ಸುತ್ತಲೂ ಅಪಾರ್ಟ್‌ಮೆಂಟ್‌ಗಳಿದ್ದು, ರಸ್ತೆ ಸಂಚಾರದಿಂದ ಸದಾ ಗಿಜುಗುಟ್ಟುತ್ತಿರುತ್ತದೆ.

ವಯಸ್ಸಾದ ಬೃಹತ್‌ ರೆಂಬೆಗಳ ಕೆಳಗೆ ಶಾಲಾ ವಾಹನಗಳು, ಇತರೇ ವಾಹನಗಳು, ಜನರು ಸಂಚರಿಸುತ್ತಲೇ ಇರುತ್ತಾರೆ. ಹೀಗೆ ರಸ್ತೆಯ ಮೇಲೆ ಹರಡಿಕೊಂಡಿರುವ ರೆಂಬೆ ಸಮೂಹಗಳಿಂದ ಅಪಾಯವಿದೆಯೋ ಇಲ್ಲವೋ ಎಂಬುದನ್ನು ಬಿ.ಬಿ.ಎಂ.ಪಿ.ಯವರು ತಜ್ಞರಿಂದ  ಪರೀಕ್ಷಿಸಿ ಕ್ರಮ ತೆಗೆದುಕೊಂಡರೆ ಅನಾಹುತ ತಪ್ಪಿಸಿದಂತಾಗುತ್ತದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.