ADVERTISEMENT

ಪೊಲೀಸರಿಗೂ ಪ್ರಶಸ್ತಿ ಕೊಡಿ

​ಪ್ರಜಾವಾಣಿ ವಾರ್ತೆ
Published 4 ಜುಲೈ 2013, 19:59 IST
Last Updated 4 ಜುಲೈ 2013, 19:59 IST

ಕಳ್ಳತನ, ವಂಚನೆ, ಕೊಲೆ, ಸುಲಿಗೆ, ಅಪಹರಣ, ಲೈಂಗಿಕ ದೌರ್ಜನ್ಯಗಳಿಗೆ ಕುಖ್ಯಾತವಾಗಿರುವ ಬೆಂಗಳೂರು ಮಹಾನಗರದಲ್ಲಿ ಅಂಥ ಕ್ಲಿಷ್ಟ, ಸೂಕ್ಷ್ಮ ಪ್ರಕರಣಗಳನ್ನು ಭೇದಿಸುವಲ್ಲಿ ಬೆಂಗಳೂರಿನ ಪೊಲೀಸರು ತಮ್ಮ ಚಾಣಾಕ್ಷತೆ, ಜಾಣತನ, ಸಾಮರ್ಥ್ಯಗಳನ್ನು ತೋರಿಸುತ್ತಿದ್ದಾರೆ. ಬೆಂಗಳೂರಿಗರ ಬದುಕನ್ನು ಭಯ, ಆತಂಕಗಳಿಂದ ಮುಕ್ತವಾಗಿಸಲು ಅವರು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದಾರೆ.

ಇಂಥವರಲ್ಲಿ ಕೆಲವರನ್ನಾದರೂ ಗುರುತಿಸಿ `ಕೆಂಪೇಗೌಡ ಪ್ರಶಸ್ತಿ' ನೀಡಿ ಗೌರವಿಸುವ ಕೆಲಸವನ್ನು ಬಿ.ಬಿ.ಎಂ.ಪಿ. ಮಾಡದಿರುವುದು ಅದರ ಕರ್ತವ್ಯಲೋಪಕ್ಕೆ ಹಿಡಿದ ಕನ್ನಡಿಯಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.