ADVERTISEMENT

ಬರ ಅಧ್ಯಯನ; ವ್ಯರ್ಥ ಪ್ರಯತ್ನ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2012, 19:30 IST
Last Updated 5 ಏಪ್ರಿಲ್ 2012, 19:30 IST

ರಾಜ್ಯದ 123 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿ ಐದಾರು  ತಿಂಗಳಾಯಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಈಗ ಬರ ಸಂತ್ರಸ್ತರ ನೆನಪಾಗಿದೆ.

ಬೆಂಗಳೂರು, ಹುಬ್ಬಳ್ಳಿ, ಗುಲ್ಬರ್ಗ, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ಸನ್ಮಾನ, ಹುಟ್ಟು ಹಬ್ಬಗಳಲ್ಲಿ ಭಾಗವಹಿಸುತ್ತ, ರೆಸಾರ್ಟ್‌ನಲ್ಲಿ ಬೆಂಬಲಿಗರ ಜತೆಯಲ್ಲಿ ಕೂತು ರಾಜಕಾರಣ ಮಾಡುತ್ತ ದಿನಕ್ಕೊಂದು ಹೇಳಿಕೆ ನೀಡುತ್ತ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದ ಅವರಿಗೆ ಇದ್ದಕ್ಕಿದ್ದಂತೆ ಬರ ಸಂತ್ರಸ್ತರು ಸಂಕಷ್ಟದಲ್ಲಿದ್ದಾರೆ ಎಂಬ ಜ್ಞಾನೋದಯವಾದದ್ದು ನಿಜಕ್ಕೂ ಅಚ್ಚರಿಯ ವಿಷಯ.

 ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಅವರ ಬರ ಅಧ್ಯಯನದ ವೈಖರಿಯನ್ನು ಟೀವಿಗಳಲ್ಲಿ ನೋಡಿ ಅಚ್ಚರಿಯಾಯಿತು. ಜನರ ಸಮಸ್ಯೆಗಳಿಗೆ ಅವರು ಸರಿಯಾಗಿ ಉತ್ತರಿಸಲಿಲ್ಲ. ಬರ ಸಂತ್ರಸ್ತರ ಸಣ್ಣ ಬೇಡಿಕೆಯನ್ನು ಈಡೇರಿಸುವ ಅಧಿಕಾರ ಇಲ್ಲದ ಯಡಿಯೂರಪ್ಪ ಅವರದು ವ್ಯರ್ಥ ಪ್ರಯತ್ನ ಅನ್ನಿಸಿತು.

ಗದಗದಲ್ಲಿ ಅವರು ಅಲ್ಲಿನ ಶಾಸಕರ ಜತೆ ಕೂತು ಉಣ್ಣುವ ದೃಶ್ಯಗಳನ್ನು ಟೀವಿಯೊಂದು ಸುಮಾರು ಅರ್ಧ ನಿಮಿಷ ತೋರಿಸಿತು. ಅದೊಂದೇ ಅವರು ಮಾಡಿದ ಸಾರ್ಥಕ ಕೆಲಸ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.