ADVERTISEMENT

ಬಸ್‌ ಸೇವೆ ಒದಗಿಸಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2016, 19:30 IST
Last Updated 11 ಜುಲೈ 2016, 19:30 IST

ಉತ್ತರಹಳ್ಳಿಯಿಂದ ಶ್ರೀನಗರಕ್ಕೆ ಹಾಗೂ  ಉತ್ತರಹಳ್ಳಿಯಿಂದ ವಿದ್ಯಾಪೀಠಕ್ಕೆ ನೇರ ಬಸ್‌ ವ್ಯವಸ್ಥೆ ಇಲ್ಲವಾಗಿದೆ. ಉತ್ತರಹಳ್ಳಿ, ಕೆ.ಎಸ್‌.ಆರ್‌.ಟಿ.ಸಿ. ಬಡಾವಣೆ ಹಾಗೂ ಚಿಕ್ಕಲಸಂದ್ರದ ನಾಗರಿಕರು ವಿದ್ಯಾಪೀಠ ಹಾಗೂ ಶ್ರೀನಗರಕ್ಕೆ ಹೋಗಲು ನೇರವಾಗಿ ಬಸ್‌ ವ್ಯವಸ್ಥೆ ಇಲ್ಲ.

ಇದರಿಂದ ನಿತ್ಯ ನೂರಾರು ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಕುರಿತಂತೆ ಸಬಂಧಪಟ್ಟವರಿಗೆ ಪತ್ರ ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇನ್ನಾದರೂ ಸಂಬಂಧಪಟ್ಟವರು ಬಸ್‌ ವ್ಯವಸ್ಥೆ ಕಲ್ಪಿಸಿ, ನಿಗದಿತ ಸಮಯದ ಬಗ್ಗೆ ಮಾಹಿತಿ ನೀಡಬೇಕಾಗಿ ವಿನಂತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.