ಹಾಲಿನ ಬೆಲೆ ಏರಿಕೆಯ ಬಿಸಿ ಆರುವ ಮೊದಲೇ ಅಕ್ಕಿಯ ಬೆಲೆ ಏರಿದೆ. ಜೊತೆಗೆ ಎಲ್ಲ ದಿನ ಬಳಕೆಯ ವಸ್ತುಗಳ ಬೆಲೆಯೂ ಏರುತ್ತಲೇ ಇದೆ.
ಕೇಂದ್ರ ಸರ್ಕಾರದ ವಿತ್ತ ಸಚಿವರು ಮಾತ್ರ ತರಕಾರಿ, ಆಹಾರ ಧಾನ್ಯಗಳ ಬೆಲೆ ಕಡಿಮೆಯಾಗಿದೆ ಎನ್ನುತ್ತಿದ್ದಾರೆ. ಬೇಳೆ ಕಾಳುಗಳು, ಅಡುಗೆ ಎಣ್ಣೆ, ಹಾಲು, ತರಕಾರಿ, ಹಣ್ಣು, ಹೂವುಗಳ ಬೆಲೆ ಗಗನಮುಖಿಯಾಗಿದೆ.
ರೈತರು ಬೆಳೆ ನಷ್ಟ, ಬೆಲೆ ಕುಸಿತದ ಸಂಕಟದಲ್ಲಿದ್ದಾರೆ. ಬಡ ಗ್ರಾಹಕರ ಹಿತ ರಕ್ಷಣೆಯ ಬಗ್ಗೆ ಸರ್ಕಾರ ಚಕಾರ ಎತ್ತುತ್ತಿಲ್ಲ. ರಾಜ್ಯದ ಬಿ.ಜೆ.ಪಿ. ಸರ್ಕಾರವಂತೂ `ಕುರ್ಚಿ ಜ್ವರ~ಕ್ಕೆ ಸಿಕ್ಕಿ ನರಳುತ್ತಿದೆ.
ಬೆಲೆ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರ ರಕ್ಷಣೆ ಮಾಡುವವವರು ಯಾರು?
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.