ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಸುಪ್ರೀಂ ಕೋರ್ಟ್ ಬಹಿರಂಗ ಪಡಿಸಿದೆ. ಅದರಲ್ಲಿ ಕರ್ನಾಟಕ ಬಹುಪಾಲು ಪಡೆದಿದೆ.
ಈ ಅವ್ಯವಹಾರದಲ್ಲಿ ಖಾಸಗಿ ಗುತ್ತಿಗೆದಾರರು ಜೊತೆಗೆ ರಾಜಕಾರಣಿಗಳು,ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ ಎಂದಾದರೆ ಬೇಲಿಯೇ ಎದ್ದು ಹೊಲ ಮೇಯುತ್ತಿರುವಾಗ ಮಕ್ಕಳಿಗೆ ಪೌಷ್ಟಿಕ ಆಹಾರವಾದರೂ ಎಲ್ಲಿ ದೊರೆಯುತ್ತದೆ? ಕರ್ನಾಟಕದಲ್ಲೆಗ 68 ಸಾವಿರ ಅಪೌಷ್ಟಿಕ ಮಕ್ಕಳು ಇದ್ದಾರೆ. ಸರ್ಕಾರ ಅದರ ನಿವಾರಣೆಗೆ ಕೋಟಿಗಟ್ಟಲೆ ಅನುದಾನ ಬಿಡುಗಡೆ ಮಾಡುತ್ತಿದೆ ಅದು ಗುತ್ತಿಗೆದಾರರ ಮತ್ತು ಅಧಿಕಾರಿಗಳ ಕೈ ಸೇರಿದರೆ ಅದಕ್ಕೆ ಹೊಣೆ ಯಾರು? ಆದ್ದರಿಂದ ಕೂಡಲೇ ಮುಖ್ಯಮಂತ್ರಿಗಳು ಇನ್ನೂ ಮುಂದೆಯಾದರು ಇಂತಹ ಅವ್ಯವಹಾರ ನಡೆಯದಂತೆ ಸೂಕ್ತ ಕ್ರಮ ಕೈಗೊಂಡು ಪೌಷ್ಟಿಕ ಆಹಾರ ದೊರೆಯುವಂತೆ ಮಾಡಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.