ADVERTISEMENT

ಮಹಿಳೆಗೆ ಅವಕಾಶ...

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2017, 19:30 IST
Last Updated 11 ಅಕ್ಟೋಬರ್ 2017, 19:30 IST

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನವೆಂಬರ್‌ನಲ್ಲಿ ನಡೆಸಲು ನಿರ್ಧರಿತವಾಗಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಾಡಿನ ಖ್ಯಾತ ಕವಿ, ಕನ್ನಡ ಪರ ಹೋರಾಟಗಾರ ಚಂಪಾ ಆಯ್ಕೆ ಸ್ವಾಗತಾರ್ಹ. ಪಾಟೀಲರಿಗೂ ಅವರನ್ನು ಆಯ್ಕೆ ಮಾಡಿದ ಪರಿಷತ್ತಿಗೂ ಅಭಿನಂದನೆಗಳು.

ಮುಂದೆ ಡಿಸೆಂಬರ್‌ ತಿಂಗಳಲ್ಲಿ ದಾವಣಗೆರೆಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಾಡಿನ ಮಹಿಳೆಯೊಬ್ಬರನ್ನು ಆಯ್ಕೆ ಮಾಡಬೇಕಾದ್ದು ಸರ್ಕಾರದ ಕರ್ತವ್ಯವಾಗಿದೆ. ಇದುವರೆಗಿನ ವಿಶ್ವ ಕನ್ನಡ ಸಮ್ಮೇಳನಗಳಲ್ಲಿ ಎಂದೂ ಮಹಿಳೆ ಅಧ್ಯಕ್ಷರಾಗಿಲ್ಲ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನವೂ ಮಹಿಳೆಗೆ ಬೆರಳೆಣಿಕೆಯಷ್ಟು ಬಾರಿ ಮಾತ್ರ ದಕ್ಕಿದೆ.
-ಕಲ್ಪನಾ ಎಂ., ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT