ADVERTISEMENT

ಮೆಟ್ರೊ ಸೇತುವೆ ಕೆಳಗೆ ರಸ್ತೆ ದುರಸ್ತಿಪಡಿಸಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 22 ಏಪ್ರಿಲ್ 2013, 19:59 IST
Last Updated 22 ಏಪ್ರಿಲ್ 2013, 19:59 IST

ಹೆಚ್ಚು ವಾಹನದಟ್ಟಣೆ ಇರುವ ಮಾಗಡಿ ಮುಖ್ಯರಸ್ತೆಯಲ್ಲಿ ಮೆಟ್ರೊ ಕಾಮಗಾರಿ ಬಹುತೇಕ ಮುಗಿದಿದ್ದು, ಸೇತುವೆಯ ಕೆಳಗಿನ ರಸ್ತೆ ಸಂಪೂರ್ಣವಾಗಿ ಕಿತ್ತು ಹೋಗಿದೆ. ಇಲ್ಲಿ ಪಾದಚಾರಿ ಮಾರ್ಗವೂ ಇಲ್ಲದಂತಾಗಿದೆ. ಇನ್ನು ವಾಹನ ಸವಾರರಿಗೆ  ಸಂಚರಿಸುವುದು ದೊಡ್ಡ ಸವಾಲಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಮಾರುಕಟ್ಟೆಗೆ ಹೋಗುವ ಬಿಎಂಟಿಸಿ ಮತ್ತು ಖಾಸಗಿ ಬಸ್‌ಗಳು, ಕಾರು, ಲಾರಿ, ಆಟೋ, ದ್ವಿಚಕ್ರ ವಾಹನಗಳು ಸಂಚರಿಸಲು ಇರುವುದು ಇದೊಂದೇ ರಸ್ತೆ. ಕೆಲ ದಿನಗಳಿಂದ ಒಂದು ರಸ್ತೆಯನ್ನು ಮುಚ್ಚಿದ್ದು ಇನ್ನೊಂದು ರಸ್ತೆಯಲ್ಲಿ ದ್ವಿಮುಖ ಸಂಚಾರ ಸಾಗಿದೆ.

ಟೋಲ್ ಗೇಟ್‌ನಿಂದ ಮಾಗಡಿ ರಸ್ತೆ ಮೊದಲ ತಿರುವಿನವರೆಗೂ ಸಂಪೂರ್ಣವಾಗಿ ಟಾರು ರಸ್ತೆ ಮಾಯವಾಗಿ ಹೊಂಡ ನಿರ್ಮಾಣವಾಗಿದೆ. ಮಳೆ ಬಂದರೆ ಈ ರಸ್ತೆಯಲ್ಲಿ ಸಂಚರಿಸುವುದು ಅಪಾಯಕಾರಿಯಾಗಲಿದೆ. ದಯವಿಟ್ಟು ಸಂಬಂಧಪಟ್ಟವರು ಕೂಡಲೇ ರಸ್ತೆ ದುರಸ್ತಿಗೆ ಮುಂದಾಗಬೇಕು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.