ADVERTISEMENT

ಯೋಜನೆ ದುರ್ಬಳಕೆ ಸಲ್ಲ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 3 ಸೆಪ್ಟೆಂಬರ್ 2013, 19:59 IST
Last Updated 3 ಸೆಪ್ಟೆಂಬರ್ 2013, 19:59 IST

ಪ್ರತಿಯೊಂದು ಕುಟುಂಬವೂ ಶೌಚಾಲಯ ಹೊಂದಿರಬೇಕು ಎಂಬ ಆಶಯದಿಂದ ಸರ್ಕಾರ ಯೋಜನೆಗಳನ್ನು ರೂಪಿಸಿದೆ.

ಆದರೆ ಈ ಯೋಜನೆಗಳು ದುರ್ಬಳಕೆಯಾಗುತ್ತಿವೆ. ಈ ಬಗೆಯ ಯೋಜನೆಗಳ ಸಮರ್ಪಕ ಜಾರಿಗೆ ಗ್ರಾಮಗಳಲ್ಲಿ ಸಭೆಗಳನ್ನು ನಡೆಸಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಅರ್ಹರಿಗೆ ಯೋಜನೆ ತಲುಪುವಂತೆ ಮಾಡಬೇಕು.

ಆದರೆ, ಅಧಿಕಾರಿಗಳು ಮತ್ತು ಪಂಚಾಯ್ತಿ ಹಂತದ ಜನಪ್ರತಿನಿಧಿಗಳು ತಮಗೆ ಬೇಕಾದವರಿಗೆ, ಆಪ್ತರಿಗೆ ಮಾತ್ರ ದೊರಕಿಸಿಕೊಡುತ್ತಾರೆ. ಯೋಜನೆಯ ಉದ್ದೇಶ ಒಳ್ಳೆಯದಾಗಿದ್ದರೆ ಸಾಲದು; ಅನುಷ್ಠಾನದಲ್ಲಿ ಅದರ ಸಾರ್ಥಕ್ಯ ಅಡಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.