
ರಾಷ್ಟ್ರೀಯ ಹೆದ್ದಾರಿ 4ನ್ನು ಚತುಷ್ಪಥ ಮಾರ್ಗವನ್ನಾಗಿ ಪರಿವರ್ತಿಸುವ ಸಂದರ್ಭದಲ್ಲಿ ನೂರಾರು ವರ್ಷಗಳಷ್ಟು ಹಳೆಯ, ಸಾವಿರಾರು ಮರಗಳನ್ನು ಕಡಿದುರುಳಿಸಲಾಗಿತ್ತು. ರಸ್ತೆ ನಿರ್ಮಾಣವಾಗುತ್ತಿದ್ದಂತೆಯೇ ಇಕ್ಕೆಲಗಳಲ್ಲಿ ಮರಗಳನ್ನು ಬೆಳೆಸುವುದಾಗಿ ಸಂಬಂಧಿಸಿದ ಇಲಾಖೆಯವರು ಜನಸಂಪರ್ಕ ಸಭೆಗಳಲ್ಲಿ ಭರವಸೆ ನೀಡಿದ್ದರು.
ರಸ್ತೆ ಕಾಮಗಾರಿ ಪೂರ್ಣಗೊಂಡು 5 ವರ್ಷಗಳಾಗುತ್ತ ಬಂದಿದ್ದರೂ ರಸ್ತೆ ಇಕ್ಕೆಲಗಳಲ್ಲಿ ಒಂದೇ ಒಂದು ಮರವನ್ನು ಬೆಳೆಸಿಲ್ಲ. ರಸ್ತೆ ವಿಭಜಕದಲ್ಲಿ ಈಗಾಗಲೇ ಸಣ್ಣ ಪೊದೆಯಂತೆ ಬೆಳೆಯುವ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆಯಷ್ಟೇ. ಮತ್ತೆ ಮರಗಳನ್ನು ಬೆಳೆಸುವ ತನ್ನ ಭರವಸೆಯಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆದುಕೊಳ್ಳಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.