ರಾಷ್ಟ್ರೀಯ ಹೆದ್ದಾರಿ 4ನ್ನು ಚತುಷ್ಪಥ ಮಾರ್ಗವನ್ನಾಗಿ ಪರಿವರ್ತಿಸುವ ಸಂದರ್ಭದಲ್ಲಿ ನೂರಾರು ವರ್ಷಗಳಷ್ಟು ಹಳೆಯ, ಸಾವಿರಾರು ಮರಗಳನ್ನು ಕಡಿದುರುಳಿಸಲಾಗಿತ್ತು. ರಸ್ತೆ ನಿರ್ಮಾಣವಾಗುತ್ತಿದ್ದಂತೆಯೇ ಇಕ್ಕೆಲಗಳಲ್ಲಿ ಮರಗಳನ್ನು ಬೆಳೆಸುವುದಾಗಿ ಸಂಬಂಧಿಸಿದ ಇಲಾಖೆಯವರು ಜನಸಂಪರ್ಕ ಸಭೆಗಳಲ್ಲಿ ಭರವಸೆ ನೀಡಿದ್ದರು.
ರಸ್ತೆ ಕಾಮಗಾರಿ ಪೂರ್ಣಗೊಂಡು 5 ವರ್ಷಗಳಾಗುತ್ತ ಬಂದಿದ್ದರೂ ರಸ್ತೆ ಇಕ್ಕೆಲಗಳಲ್ಲಿ ಒಂದೇ ಒಂದು ಮರವನ್ನು ಬೆಳೆಸಿಲ್ಲ. ರಸ್ತೆ ವಿಭಜಕದಲ್ಲಿ ಈಗಾಗಲೇ ಸಣ್ಣ ಪೊದೆಯಂತೆ ಬೆಳೆಯುವ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆಯಷ್ಟೇ. ಮತ್ತೆ ಮರಗಳನ್ನು ಬೆಳೆಸುವ ತನ್ನ ಭರವಸೆಯಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆದುಕೊಳ್ಳಲಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.