ADVERTISEMENT

ರೈಲು ವೇಳಾಪಟ್ಟಿ ಬದಲಿನಿಂದ ತೊಂದರೆ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 8 ಏಪ್ರಿಲ್ 2013, 19:59 IST
Last Updated 8 ಏಪ್ರಿಲ್ 2013, 19:59 IST

ಮೈಸೂರಿನಿಂದ ಅರಸೀಕೆರೆಗೆ ಹೊರಡುವ ಪ್ಯಾಸೆಂಜರ್ ರೈಲುಗಾಡಿಯು ಈ ಹಿಂದೆ ಸಂಜೆ 6.20ಕ್ಕೆ ಮೈಸೂರನ್ನು ಬಿಡುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುತ್ತಿತ್ತು. ಈಗ ರೈಲುಗಾಡಿಯು ಸಂಜೆ 6.45ಕ್ಕೆ ಹೊರಡುವುದರಿಂದ ವಿವಿಧ ರೈಲು ನಿಲ್ದಾಣಗಳಲ್ಲಿ ಇಳಿದು ತಮ್ಮ ತಮ್ಮ ಊರುಗಳಿಗೆ ತಲುಪಲು ರಾತ್ರಿವೇಳೆ ಸಾರಿಗೆ ವ್ಯವಸ್ಥೆ ಇಲ್ಲದೇ ಸಾರ್ವಜನಿಕರು ಪರದಾಡುವಂತಾಗಿ ಅನಾನುಕೂಲವೇ ಹೆಚ್ಚಾಗಿದೆ. ದಯವಿಟ್ಟು ವೇಳಾಪಟ್ಟಿಯನ್ನು ಮೊದಲಿನಂತೆ ಬದಲಾಯಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕಾಗಿ ಮನವಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.