
ಪ್ರಜಾವಾಣಿ ವಾರ್ತೆರಾಜ್ಯ ವಕ್ಫ್ ಮಂಡಳಿಯ ಆಸ್ತಿ ಕಬಳಿಕೆ ಕುರಿತು ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರು ಸಲ್ಲಿಸಿದ ವರದಿ ಕುರಿತು ಪತ್ರಿಕೆಯಲ್ಲಿ ಓದಿ ಅಚ್ಚರಿಯಾಯಿತು. ಈ ವರದಿ ಬಗ್ಗೆ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳುತ್ತದೆ ಎಂಬುದು ಗೊತ್ತಾಗಿಲ್ಲ.
ಅನ್ವರ್ ಮಾಣಿಪ್ಪಾಡಿ ಅವರು ರಾಜಕೀಯ ದುರುದ್ದೇಶದಿಂದ ಸುಳ್ಳು ವರದಿ ನೀಡಿದ್ದಾರೆ ಎಂದು ಅನೇಕ ಹಿರಿಯ ಮುಸ್ಲಿಂ ಮುಖಂಡರು ಹೇಳಿದ್ದಾರೆ. ಇದರಿಂದ ಮುಸ್ಲಿಮರಲ್ಲಿ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು.
ವಕ್ಫ್ ಆಸ್ತಿ ಕಬಳಿಸಿದ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆಸಕ್ತಿ ಇದ್ದಂತೆ ಕಾಣುವುದಿಲ್ಲ. ಈ ವರದಿಯನ್ನು ಇಟ್ಟುಕೊಂಡು ಆಡಳಿತ ಪಕ್ಷ ಬಿಜೆಪಿ ಚುನಾವಣೆ ಸಂದರ್ಭದಲ್ಲಿ ರಾಜಕೀಯ ದುರ್ಲಾಭ ಪಡೆಯುವ ಸಾಧ್ಯತೆಗಳಿವೆ. ಅದಕ್ಕೆ ಅವಕಾಶ ಕೊಡಬಾರದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.