ADVERTISEMENT

ವಾಯು ಮಾಲಿನ್ಯ ತಡೆಗಟ್ಟಿ

ವಿಜಯ್ ಕುಮಾರ್ ಬಿ.
Published 10 ಜೂನ್ 2013, 19:59 IST
Last Updated 10 ಜೂನ್ 2013, 19:59 IST

ನಗರದಲ್ಲಿ ಸಂಚಾರಿಸುವ ಸರಕು ಸಾಗಾಣಿಕೆ ವಾಹನಗಳು ಮತ್ತು ಕೆಲವು ಬಿಎಂಟಿಸಿ ಹಾಗೂ ಖಾಸಗಿ ಬಸ್‌ಗಳು ಕೂಡಾ ತುಂಬ ಹೊಗೆಯನ್ನು ಬಿಡುತ್ತಿರುತ್ತವೆ. ಇದರಿಂದ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ. ಸಾರಿಗೆ ಇಲಾಖೆಯ ವಾಯು ಮಾಲಿನ್ಯ ತಪಾಸಣೆಯನ್ನು ನಿಗದಿತ ಅವಧಿಯಲ್ಲಿ ಮಾಡಿಸುವಂತೆ ಆದೇಶವಿದ್ದರೂ ವಾಹನಗಳು ಹೊಗೆ ಹೊರಬಿಡುತ್ತಿರುವುದು ಸರ್ವೆ ಸಾಮಾನ್ಯವಾಗಿದೆ.

ಇದರಿಂದ ಜನತೆಯ ಮೇಲೆ ಅನಾರೋಗ್ಯದ ಪರಿಣಾಮ ಉಂಟಾಗುತ್ತಿದ್ದು ಮಕ್ಕಳು, ಹಿರಿಯ ನಾಗರಿಕರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ತುಂಬಾ ತೊಂದರೆ ಉಂಟು ಮಾಡುತ್ತದೆ. ಸರ್ಕಾರ ಈ ವಿಷಯ ಮನಗಂಡು ನಗರದ ಪ್ರತಿಯೊಂದು ಬಡಾವಣೆಗಳಲ್ಲಿ ವಾಹನ ತಪಾಸಣೆಯನ್ನು ನಿರಂತರವಾಗಿ ನಡೆಸಿ, ನಾಗರಿಕರಿಗೆ ಉಂಟಾಗುತ್ತಿರುವ ಕಿರಿಕಿರಿಯನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು.
- ವಿಜಯ್ ಕುಮಾರ್ ಬಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.