
ಕೃಷ್ಣರಾಜಪುರ ರೈಲ್ವೆ ನಿಲ್ದಾಣಕ್ಕೆ ಬಂದು ಹೋಗುವ ಪ್ರಯಾಣಿಕರಿಗೆ ದೂರವಾಣಿ ನಗರ ಅಂದರೆ ಐ.ಟಿ.ಐ. ಕಾಲೊನಿ, ರಾಮಮೂರ್ತಿನಗರ ಮತ್ತು ಬಾಣಸವಾಡಿ ಮೂಲಕ ಮುಂದೆ ಪ್ರಯಾಣಿಸುವ ಸಾವಿರಾರು ಪ್ರಯಾಣಿಕರಿಗೆ ಸಾರಿಗೆ ವ್ಯವಸ್ಥೆಯಿಲ್ಲದೆ ಆಟೊಗಳಿಗೆ ದುಬಾರಿ ಬೆಲೆ ತೆತ್ತು ಪ್ರಯಾಣಿಸುವ ಅನಿವಾರ್ಯತೆಯಿದೆ.
ಬಿ.ಎಂ.ಟಿ.ಸಿ. ಅಧಿಕಾರಿಗಳು ಈ ಸಮಸ್ಯೆಯನ್ನು ಪರಿಶೀಲಿಸಿ ಕೃಷ್ಣರಾಜಪುರ ರೈಲ್ವೆ ನಿಲ್ದಾಣದಿಂದ ಐ.ಟಿ.ಐ. ಕಾಲೊನಿ, ರಾಮಮೂರ್ತಿನಗರ, ಚನ್ನಸಂದ್ರ ಸೇತುವೆ, ಬಾಣಸವಾಡಿ ಮಾರ್ಗದಲ್ಲಿ ಕೆಲವು ಬಸ್ಸುಗಳ ಸಂಚಾರ ಕಲ್ಪಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.