ADVERTISEMENT

ಸಫಲವಾಗಲಿ ಸಕಾಲ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2012, 19:30 IST
Last Updated 10 ಏಪ್ರಿಲ್ 2012, 19:30 IST

ಜನತೆಯ ಆಶೋತ್ತರಗಳಿಗೆ ಕ್ಷಿಪ್ರ ಗತಿಯಲ್ಲಿ ಸ್ಪಂದಿಸಲು ಜಾರಿಗೆ ತಂದಿರುವ `ಸಕಾಲ~ ಯೋಜನೆಯನ್ನು ರಾಜ್ಯದಾದ್ಯಂತ ಸರ್ಕಾರ ಜಾರಿಗೆ ತಂದಿದೆ. ಪ್ರಮುಖ ಇಲಾಖೆಗಳಲ್ಲಿ ಒಂದಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯೂ ಒಂದಾಗಿದೆ.

ಆದರೆ, ಈ ಇಲಾಖೆಗೆ ಬರುವ ಸಾರ್ವಜನಿಕರ ಕಡತ ವಿಲೇವಾರಿ ಮಾಡಲು ಹಾಗೂ ಯೋಜನೆಯ ಸಫಲತೆಗೆ ಕಾರಣವಾಗಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಾವಿರಾರು ಹುದ್ದೆಗಳು ಖಾಲಿ ಇವೆ.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಈ ಹಿಂದೆ ನೇಮಕಾತಿ ಪ್ರಕಟಣೆಗೊಂಡು ಒಂದು ವರ್ಷ ಕಳೆದರೂ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುತ್ತಿಲ್ಲ. ರಾಜ್ಯ ಉಚ್ಚ ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದಿದ್ದರೆ ಬಹುನಿರೀಕ್ಷತ `ಸಕಾಲ~ ಯೋಜನೆ `ಅಕಾಲ~ದಲ್ಲಿ ಮುಗ್ಗರಿಸುವಂತೆ ಆಗಬಾರದಲ್ಲವೇ! 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.