ಸರ್ಕಾರವು ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗ ಹುದ್ದೆಯನ್ನು ಮೆರಿಟ್ ಆಧಾರದ ಮೇಲೆ ನೇಮಕ ಮಾಡಿಕೊಳ್ಳುತ್ತಿದೆ. ಇದರಿಂದ ಎಷ್ಟೋ ಮಂದಿ ನಿರುದ್ಯೋಗಿಗಳಿಗೆ ಅನ್ಯಾಯ ಆಗುವುದಿಲ್ಲವೆ?
ಏಕೆಂದರೆ 7–8 ವರ್ಷಗಳ ಹಿಂದೆ ಶೇ 35ರಷ್ಟು ಅಂಕ ಪಡೆದು ಉತ್ತೀರ್ಣರಾದರೆ ಅದೇ ದೊಡ್ಡ ಸಾಧನೆ. ಆ ದಿನಗಳಲ್ಲಿ ಉತ್ತೀರ್ಣರಾಗುತ್ತಿದ್ದವರ ಸಂಖ್ಯೆಯೇ ಕಡಿಮೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಪಡೆಯುವವರಿದ್ದಾರೆ. ಈ ಅಂಕ ಆಧಾರದ ಮೇಲೆ ನೇಮಿಸಿಕೊಳ್ಳುವ ಸರ್ಕಾರದ ನಿಯಮದಿಂದ ಹಿಂದಿನ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತೆ ಆಗುವುದಿಲ್ಲವೆ?
ಇದರ ಬದಲು ಸಿಇಟಿ ಮೂಲಕ ನೇಮಕ ಮಾಡಿಕೊಂಡರೆ ಕಂದಾಯ ಇಲಾಖೆಗೆ ಸಂಬಂಧಿಸಿದ ವಿಷಯಗಳನ್ನು ಚೆನ್ನಾಗಿ ತಿಳಿದುಕೊಳ್ಳುತ್ತಾರೆ ಮತ್ತು ಎಲ್ಲರಿಗೂ ಕೂಡ ಸಮಾನ ಅವಕಾಶ ಕಲ್ಪಿಸಿದಂತಾಗುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.