ADVERTISEMENT

ಹೆಳವನ ಹೆಗಲ ಮೇಲೆ...

​ಪ್ರಜಾವಾಣಿ ವಾರ್ತೆ
Published 28 ಮೇ 2018, 19:30 IST
Last Updated 28 ಮೇ 2018, 19:30 IST

ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ವಿಧಾನ ಸಭೆಯಲ್ಲಿ ಮಾತನಾಡುತ್ತ, ‘ಹೆಳವನ ಹೆಗಲ ಮೇಲೆ ಕುರುಡ ಕೂತಿದ್ದಾನೆ. ದಾರಿ ಸಾಗುವುದೆಂತೋ ನೋಡಬೇಕು’ ಎಂದು ಕವಿ ಗೋಪಾಲಕೃಷ್ಣ ಅಡಿಗರು ಹೇಳಿದ್ದಾರೆ ಎಂದಿದ್ದರು (ಪ್ರ.ವಾ., ಮೇ 26).

ಆದರೆ, ಆ ಪ್ರತಿಭಾವಂತ ಚಿಂತನೆ ಮಹಾಕವಿ ಹರಿಹರನದು.

‘ಪೆಳವನ ಕಣ್ಗಳಂಧಕನ ಕಾಲ್ಗಳಿವಿಂತೊಡಗೂಡಿ ಗಾವುದಂ ದಳರ್ದೊಡೆ ಬಲ್ಲಿದಂ ನಡೆದ ಮಾಳ್ಕೆಯೆನಿಪ್ಪುದೆ’. (ಗಿರಿಜಾ ಕಲ್ಯಾಣ ಮಹಾಪ್ರಬಂಧಂ 1–28)

ADVERTISEMENT

-ಡಾ. ಜಿ. ಕೃಷ್ಣಪ್ಪ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.