ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ವಿಧಾನ ಸಭೆಯಲ್ಲಿ ಮಾತನಾಡುತ್ತ, ‘ಹೆಳವನ ಹೆಗಲ ಮೇಲೆ ಕುರುಡ ಕೂತಿದ್ದಾನೆ. ದಾರಿ ಸಾಗುವುದೆಂತೋ ನೋಡಬೇಕು’ ಎಂದು ಕವಿ ಗೋಪಾಲಕೃಷ್ಣ ಅಡಿಗರು ಹೇಳಿದ್ದಾರೆ ಎಂದಿದ್ದರು (ಪ್ರ.ವಾ., ಮೇ 26).
ಆದರೆ, ಆ ಪ್ರತಿಭಾವಂತ ಚಿಂತನೆ ಮಹಾಕವಿ ಹರಿಹರನದು.
‘ಪೆಳವನ ಕಣ್ಗಳಂಧಕನ ಕಾಲ್ಗಳಿವಿಂತೊಡಗೂಡಿ ಗಾವುದಂ ದಳರ್ದೊಡೆ ಬಲ್ಲಿದಂ ನಡೆದ ಮಾಳ್ಕೆಯೆನಿಪ್ಪುದೆ’. (ಗಿರಿಜಾ ಕಲ್ಯಾಣ ಮಹಾಪ್ರಬಂಧಂ 1–28)
-ಡಾ. ಜಿ. ಕೃಷ್ಣಪ್ಪ, ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.