ADVERTISEMENT

ಹೊಂಡಗಳನ್ನು ಮುಚ್ಚಿಸಿ

ಜೆ.ಆರ್‌.ಆದಿನಾರಾಯಣ ಮುನಿ, ಬೆಂಗಳೂರು
Published 16 ಡಿಸೆಂಬರ್ 2013, 19:30 IST
Last Updated 16 ಡಿಸೆಂಬರ್ 2013, 19:30 IST

ಬನ್ನೇರುಘಟ್ಟ ರಸ್ತೆಯ ಕಾರ್ಮಿಕ ಭವನದ ಮುಂದಿನ ಡೈರಿ ವೃತ್ತಕ್ಕೆ ಹೋಗುವ ರಸ್ತೆಯಲ್ಲಿ ಸುಮಾರು ಅರ್ಧ ಅಡಿಗಿಂತಲೂ ಹೆಚ್ಚು ಆಳದ ಹಾಗೂ ಎರಡು–ಮೂರು ಅಡಿಗಳ ಅಗಲದ ಅನೇಕ ಕಂದಕಗಳಿದ್ದು, ಸಾರ್ವಜನಿಕ ಹಾಗೂ ಖಾಸಗಿ ವಾಹನಗಳಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರು ಮತ್ತು ಕಿದ್ವಾಯಿ ಹಾಗೂ ಮಾನಸಿಕ ಆರೋಗ್ಯದ ಆಸ್ಪತ್ರೆಗಳಿಗೆ ಹೋಗುವ ರೋಗಿಗಳಿಗೆ ಈ ರೀತಿಯ ಕಂದಕಗಳಿಂದ ಅಪಘಾತವಾಗುವ ಸಂಭವವಿದೆ. ತಕ್ಷಣ ಈ ಗುಂಡಿಗಳನ್ನು ಮುಚ್ಚಬೇಕು. ಪಾದಚಾರಿ ರಸ್ತೆಯಲ್ಲಿ ಹಾಕಿರುವ ಮಣ್ಣಿನ ಗುಡ್ಡೆಗಳನ್ನು ತೆರವುಗೊಳಿಸಬೇಕು.
–ಜೆ.ಆರ್‌.ಆದಿನಾರಾಯಣಮುನಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.