ADVERTISEMENT

25 ವರ್ಷಗಳ ಹಿಂದೆ: ಮಂಗಳವಾರ 11–2–1997

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2022, 20:15 IST
Last Updated 10 ಫೆಬ್ರುವರಿ 2022, 20:15 IST
   

ಆಲಮಟ್ಟಿ: ಬಸು ಮಧ್ಯಸ್ಥಿಕೆ

ಹೈದರಾಬಾದ್, ಫೆ.10 (ಪಿಟಿಐ)– ಕರ್ನಾಟಕ ಮತ್ತು ಆಂಧ್ರ ಪ್ರದೇಶಗಳ ನಡುವಿನ ಆಲಮಟ್ಟಿ ಅಣೆಕಟ್ಟು ವಿವಾದ ಇತ್ಯರ್ಥ ಕುರಿತಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಜ್ಯೋತಿ ಬಸು ಅವರು ಮಧ್ಯಸ್ಥಿಕೆ ವಹಿಸಲಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಇಂದು ಈ ವಿಷಯ ಪ್ರಕಟಿಸಿದರು.

ADVERTISEMENT

ಆಲಮಟ್ಟಿ ಕುರಿತ ತಜ್ಞರ ಸಮಿತಿ, ವಿವಾದದ ಇತ್ಯರ್ಥಕ್ಕಾಗಿ ರಚಿಸಲಾಗಿರುವ ಸಂಯುಕ್ತರಂಗ ಮುಖ್ಯಮಂತ್ರಿಗಳ ಸಮಿತಿಯ ಮುಖ್ಯಸ್ಥ ಜ್ಯೋತಿ ಬಸು ಅವರಿಗೆ ಈಗಾಗಲೇ ವರದಿ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.