ADVERTISEMENT

ಕಾಮಗಾರಿ ಪರಿಶೀಲಿಸಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2018, 19:30 IST
Last Updated 26 ಜನವರಿ 2018, 19:30 IST

ಶ್ರವಣಬೆಳಗೊಳದಲ್ಲಿ ಫೆಬ್ರುವರಿ ತಿಂಗಳಲ್ಲಿ ನಡೆಯಲಿರುವ ಗೊಮ್ಮಟೇಶ್ವರನ ಮಹಾಮಸ್ತಕಾಭಿಷೇಕದ ಪೂರ್ವಸಿದ್ಧತೆ ಕುಂಟುತ್ತಾ, ತೆವಳುತ್ತಾ ಸಾಗುತ್ತಿದೆ. ರಾಜ್ಯ ಸರ್ಕಾರದ ಬೊಕ್ಕಸದಿಂದ ಬಿಡುಗಡೆಗೊಳ್ಳುವ ಪ್ರತಿಯೊಂದು ಪೈಸೆಯೂ ಸದ್ವಿನಿಯೋಗವಾಗಬೇಕು ಎಂಬುದು ಶ್ರವಣಬೆಳಗೊಳದ ನಾಗರಿಕರ ಆಶಯವಾಗಿದೆ. ಆದರೆ ಇಲ್ಲಿ ಕೆಲವು ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಜಿಲ್ಲಾಧಿಕಾರಿ ಮತ್ತು ವಿಶೇಷಾಧಿಕಾರಿ ಖುದ್ದಾಗಿ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಬೇಕು. ಕಾಮಗಾರಿ ಕಳಪೆಯಾಗದಂತೆ ಎಚ್ಚರವಹಿಸಬೇಕು.

ವಿಶ್ವದ ಗಮನ ಸೆಳೆಯುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರುವಂತೆ ನೋಡಿಕೊಳ್ಳುವ ಜವಾಬ್ದಾರಿ ಸರ್ಕಾರದ ಮೇಲೆ ಇದೆ.

–ಕೆ.ಪಿ. ಗಿರೀಶ, ಶ್ರವಣಬೆಳಗೊಳ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.