ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರ ಪ್ರತಿಮೆಯನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಥಾಪಿಸುತ್ತಿರುವುದು ಸಂತೋಷದ ಸಂಗತಿ. ಆದರೆ, ಬೆಂಗಳೂರು ನಗರದಲ್ಲಿ ಕೆಂಪೇಗೌಡರ ಕಾಲದ ಅನೇಕ ಸ್ಮಾರಕಗಳಿವೆ. ಆ ಸ್ಮಾರಕಗಳ ಸುತ್ತಮುತ್ತಲಿನ ಅನೇಕ ಆಸ್ತಿಗಳು ಯಾರದೋ ಪಾಲಾಗಿವೆ. ಕೆಲವರು ಸಂಬಂಧಪಟ್ಟ ಇಲಾಖೆಯ ಸಹಕಾರದಿಂದ ಮಂಜೂರು ಸಹ ಮಾಡಿಸಿಕೊಂಡು ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಪರಿಣಾಮವಾಗಿ ಸ್ಮಾರಕಗಳ ಇರುವಿಕೆಯೇ ಗೊತ್ತಾಗದಂತೆ ಆಗಿದೆ. ಈ ಸಂಬಂಧ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇಂತಹ ಕಟ್ಟಡಗಳನ್ನು ತೆರವುಗೊಳಿಸುವ ಮೂಲಕ ಸ್ಮಾರಕಗಳನ್ನು ಉಳಿಸಬೇಕು.
-ಸಿ. ಕಾಳಯ್ಯ, ಬೆಂಗಳೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.