ADVERTISEMENT

ವಾಚಕರ ವಾಣಿ | ಮೂರು ರಾಜಧಾನಿಗಳು: ಮಹತ್ವದ ಕ್ರಮ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 17:42 IST
Last Updated 4 ಆಗಸ್ಟ್ 2020, 17:42 IST

ಆಂಧ್ರಪ್ರದೇಶಕ್ಕೆ ವಿಶಾಖಪಟ್ಟಣ, ಅಮರಾವತಿ ಮತ್ತು ಕರ್ನೂಲ್‌ ನಗರಗಳನ್ನು ಕ್ರಮವಾಗಿ ಕಾರ್ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗದ ರಾಜಧಾನಿಗಳನ್ನಾಗಿ ಮಾಡಲು ನಿರ್ಧರಿಸಲಾಗಿದೆ. ಈ ಕ್ರಮದಿಂದ ರಾಜ್ಯದ ಬೊಕ್ಕಸಕ್ಕೆ ಎಷ್ಟೇ ಖರ್ಚು ಬರಲಿ, ಸುಗಮ ಮತ್ತು ಪರಿಣಾಮಕಾರಿ ಆಡಳಿತದ ದೃಷ್ಟಿಯಿಂದ ಇದು ಮಹತ್ವದ ಕ್ರಮ ಎಂದು ಹೇಳಬಹುದು. ಅಲ್ಲದೆ, ನಿರ್ಲಕ್ಷ್ಯದ ಕೂಗನ್ನು ನಿಯಂತ್ರಿಸಿ, ಪ್ರತ್ಯೇಕ ರಾಜ್ಯಗಳ ಬೇಡಿಕೆಯನ್ನು ಚಿವುಟಬಹುದು. ಇಂತಹುದೇ ಉದ್ದೇಶಕ್ಕೆ ಕರ್ನಾಟಕದಲ್ಲಿ ಕಟ್ಟಿದ ಬೆಳಗಾವಿಯ ಸುವರ್ಣಸೌಧ ಇನ್ನೂ ತನ್ನ ಉದ್ದೇಶ ಸಾಧಿಸದಿರುವುದು ವಿಪರ್ಯಾಸ.

- ರಮಾನಂದ ಶರ್ಮಾ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT