ಹೈನುಗಾರಿಕೆಯು ರೈತರಿಗೆ ಆರ್ಥಿಕ ಶಕ್ತಿ ತುಂಬುವಲ್ಲಿ ಯಶಸ್ವಿಯಾಗಿದೆ. ಅನೇಕ ರೈತರು ಇಂದು ಹೈನುಗಾರಿಕೆಯನ್ನೇ ಪ್ರಮುಖ ಕಸುಬಾಗಿಸಿಕೊಂಡು ಆರ್ಥಿಕವಾಗಿ ಚೇತರಿಕೆ ಕಂಡಿದ್ದಾರೆ. ಆದರೆ ತಮ್ಮ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಯಲ್ಲಿ ಉಳಿಸಿಕೊಳ್ಳಬೇಕಾದರೆ ರೈತರು ಪಶುಗಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲೂ ಅಷ್ಟೇ ಕಾಳಜಿ ವಹಿಸುವುದು ಅಗತ್ಯ. ಆದರೆ ಪಶುವೈದ್ಯರ ಕೊರತೆಯಿಂದಾಗಿ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ.
ಬೆಳಗಾವಿಯಲ್ಲಿ ಈಚೆಗೆ ನಡೆದ ವಿಧಾನಮಂಡಲದ ಅಧಿವೇಶನದಲ್ಲಿ ಪಶುಸಂಗೋಪನಾ ಸಚಿವರು, ಶೀಘ್ರದಲ್ಲೇ ಪಶುವೈದ್ಯರ ನೇಮಕ ಮಾಡುವ ಭರವಸೆ ನೀಡಿದ್ದಾರೆ. ಬಿರುಬೇಸಿಗೆ ಆರಂಭವಾಗುವುದಕ್ಕೂ ಮೊದಲು ಈ ನೇಮಕಾತಿ ಮಾಡುವ ಮೂಲಕ ಸಚಿವರು ನಾಡಿನ ರೈತರಿಗೆ ನೆರವಾಗಬೇಕು.
–ಎನ್. ಚಿಕ್ಕೇಗೌಡ, ಚನ್ನಾಪುರ, ಹಾಸನ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.