ಚಿತ್ರಕಲಾ ಪ್ರದರ್ಶನಕ್ಕೆ ಧನಸಹಾಯ ಹಾಗೂ ಹಲವಾರು ಸಂಘ–ಸಂಸ್ಥೆಗಳಿಗೆ ಅನುದಾನ ನೀಡಲು ಕಳೆದ ಬಾರಿಯ ಬಜೆಟ್ನಲ್ಲಿ ಆದೇಶಿಸಲಾಗಿತ್ತು. ಆದರೆ ಕೆಲವು ತಾಂತ್ರಿಕ ಸಮಸ್ಯೆಗಳು ಇರುವುದರಿಂದ ತಮ್ಮ ಖಾತೆಗೆ ಹಣ ವರ್ಗಾವಣೆ ಮಾಡಲು ಆಗಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ವಿವರಣೆ ನೀಡಿದ್ದರು. ಒಂದು ವರ್ಷದಿಂದಲೂ ಅಧಿಕಾರಿಗಳನ್ನು ಭೇಟಿ ಮಾಡಿದಾಗಲೆಲ್ಲ ಇದೇ ಉತ್ತರ ದೊರೆಯುತ್ತಿದೆ.
ಪ್ರಸಕ್ತ ಸಾಲಿನ ಅನುದಾನ ಬಿಡುಗಡೆಗೆ ಅರ್ಜಿ ಕರೆಯಲಾಗಿದೆ. ತಿಂಗಳಾಂತ್ಯದಲ್ಲಿ ಬಿಡುಗಡೆ ಮಾಡಲು ಇಲಾಖೆಯು ತಯಾರಿ ಮಾಡಿಕೊಳ್ಳುತ್ತಿದೆ. ಆದರೂ ಕಳೆದ ಬಾರಿಯ ಅನುದಾನ ಬಿಡುಗಡೆ ಮಾಡಲು ಏಕೆ ಮೀನ ಮೇಷ ಎಣಿಸುತ್ತಿದೆ ಎಂಬುದು ತಿಳಿಯುತ್ತಿಲ್ಲ. ಕೊರೊನಾದ ನಂತರ ಸಂಕಷ್ಟದಲ್ಲಿರುವ ಕಲಾವಿದರ ನೆರವಿಗೆ ಸರ್ಕಾರ ಧಾವಿಸಬೇಕು.
-ನರಸಿಂಹಮೂರ್ತಿ, ತುಮಕೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.