ADVERTISEMENT

ವಾಚಕರ ವಾಣಿ: ತ್ರಿವರ್ಣ ಮಾಸ್ಕ್ ವಿತರಣೆ ಸರಿಯೇ?

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 19:30 IST
Last Updated 12 ನವೆಂಬರ್ 2020, 19:30 IST

ಅರುಣಾಚಲ ಪ್ರದೇಶದಲ್ಲಿ ಇದೇ 16ರಿಂದ ಶಾಲೆಗಳು ಪ್ರಾರಂಭವಾಗುತ್ತಿರುವ ಸುದ್ದಿಯನ್ನು (ಪ್ರ.ವಾ., ನ. 11) ತಿಳಿದು ಸಂತೋಷವಾಯಿತು. ಆದರೆ ಅಲ್ಲಿನ ಸರ್ಕಾರ, ಕೋವಿಡ್‌ನಿಂದ ರಕ್ಷಣೆ ಪಡೆಯಲು ಹಾಗೂ ರಾಷ್ಟ್ರೀಯತೆ ಬಗ್ಗೆ ಅರಿವು ಮೂಡಿಸಲು ವಿದ್ಯಾರ್ಥಿಗಳಿಗೆ ತ್ರಿವರ್ಣದ ಮಾಸ್ಕ್‌ ವಿತರಿಸಲು ನಿರ್ಧರಿಸಿದೆ. ಇದರಿಂದಾಗುವ ಪರಿಣಾಮವನ್ನು ಸರ್ಕಾರ ಮೊದಲು ಅರಿಯಬೇಕಾಗಿದೆ. ಏಕೆಂದರೆ, ಭವ್ಯ ಭಾರತ ದೇಶವನ್ನು ಪ್ರತಿನಿಧಿಸುವ ತ್ರಿವರ್ಣ ಮಾಸ್ಕನ್ನು ಶಾಲಾ ಅವಧಿಯ ನಂತರ ಮಕ್ಕಳು ಎಲ್ಲೆಂದರಲ್ಲಿ ಬಿಸಾಡುವುದು ಸರ್ವೇ ಸಾಮಾನ್ಯ. ಇದರಿಂದ ದೇಶದ ಘನತೆ, ಗೌರವಕ್ಕೆ ಧಕ್ಕೆ ಉಂಟಾಗುತ್ತದೆ. ಹೀಗಾಗಿ ಈ ವಿಚಾರದಲ್ಲಿ ಯೋಚಿಸಿ ಮುಂದುವರಿಯುವುದು ಒಳ್ಳೆಯದು.

–ಶ್ರೀಧರ ವಾಣಿ, ಕೊಪ್ಪಳ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT