ಆಸ್ಟ್ರೇಲಿಯಾದ ಅರಣ್ಯಗಳಲ್ಲಿ ಕಾಳ್ಗಿಚ್ಚು ಉಂಟು ಮಾಡಿರುವ ವ್ಯಾಪಕ ಜೀವಹಾನಿ ಹಾಗೂ ಪರಿಸರ ಹಾನಿಯನ್ನು ಡಾ. ಎಂ.ವೆಂಕಟಸ್ವಾಮಿ ವಿಸ್ತೃತವಾಗಿ ವಿವರಿಸಿದ್ದಾರೆ (ಸಂಗತ, ಜ. 15). ಇದು, ನಮಗೆ ಎಚ್ಚರಿಕೆಯ ಗಂಟೆ. ನಾವು ಇನ್ನಾದರೂ ಎಚ್ಚೆತ್ತು, ನಮ್ಮಲ್ಲಿರುವ ಅರಣ್ಯ ಸಂಪತ್ತಿನ ಉಳಿವಿಗಾಗಿ ಶ್ರಮಿಸಬೇಕಾಗಿದೆ. ಪ್ರತಿಯೊಬ್ಬರೂ ಪರಿಸರ ಪ್ರಜ್ಞೆಯನ್ನು ಬೆಳೆಸಿಕೊಂಡು ಮುಂದಿನ ಪೀಳಿಗೆಗೆ ಉತ್ತಮವಾದ ಪರಿಸರ ವ್ಯವಸ್ಥೆಯನ್ನು ನಿರ್ಮಿಸಿಕೊಡುವ ಕಾರ್ಯಕ್ಕೆ ಕೈಜೋಡಿಸಬೇಕಾಗಿದೆ. ಅರಣ್ಯಗಳು ಮಾನವ ಹಾಗೂ ಪ್ರಾಣಿ– ಪಕ್ಷಿ ಸಂಕುಲದ ಜೀವನಾಡಿ. ಅವುಗಳ ಉಳಿವಿಗೆ ಕೈಜೋಡಿಸಬೇಕಾದ ಕರ್ತವ್ಯ ಪ್ರತಿಯೊಬ್ಬರದೂ ಆಗಿರುತ್ತದೆ. ತಮ್ಮ ತಮ್ಮ ಹುಟ್ಟುಹಬ್ಬದ ದಿನ ಒಂದು ಸಸಿಯನ್ನು ನೆಟ್ಟು, ಪೋಷಿಸಿದರೆ ಪರಿಸರಕ್ಕೆ ಅಳಿಲು ಸೇವೆ ಸಲ್ಲಿಸಿದಂತೆ ಆಗುತ್ತದೆ.
-ವಿನಾಯಕ ಎಂ.ಎಂ., ಹಂಪಸಾಗರ, ಹಗರಿಬೊಮ್ಮನಹಳ್ಳಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.