ADVERTISEMENT

ಬ್ಯಾಗ್‌ರಹಿತ ಶಾಲೆ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 10 ಜುಲೈ 2019, 19:45 IST
Last Updated 10 ಜುಲೈ 2019, 19:45 IST

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಶಾಲೆಗಳು ‘ಬ್ಯಾಗ್‌ರಹಿತ ದಿನ’ ಯೋಜನೆಯನ್ನು ಜಾರಿ ಮಾಡುವ ಮೂಲಕ ದೇಶದ ಗಮನ ಸೆಳೆದಿವೆ. ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಈ ಕ್ರಮವನ್ನು ಜಾರಿಗೆ ತಂದರೆ ಮಕ್ಕಳ ಮಾನಸಿಕ ಹಾಗೂ ಭೌತಿಕ ಬೆಳವಣಿಗೆಗೆ ಸಹಕಾರಿಯಾದೀತು.

ಪುಸ್ತಕದ ಹೊರೆ ಇಲ್ಲದೆ ಶಾಲೆಗೆ ಹೋಗುವುದು ಮಕ್ಕಳಿಗೆ ಪ್ರವಾಸ ಹೋದ ಅನುಭವ ನೀಡುತ್ತದೆ. ಓದು, ಬರಹದ ಚಿಂತೆ ಇಲ್ಲದೆ ಮನಸ್ಸು ಹಗುರವಾಗಿರುತ್ತದೆ. ಈ ವಿಧಾನದಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿ ಪ್ರತಿಭೆಯ ಪ್ರದರ್ಶನಕ್ಕೆ ಅವಕಾಶ ಲಭಿಸುತ್ತದೆ. ಪಠ್ಯೇತರ ಚಟುವಟಿಕೆಗಳಿಗೆ ಉತ್ತೇಜನ ಲಭಿಸುತ್ತದೆ. ಮಕ್ಕಳ ಶೈಕ್ಷಣಿಕ ಏಳಿಗೆಯ ಮೇಲೂ ಇದು ಒಳ್ಳೆಯ ಪರಿಣಾಮ ಉಂಟುಮಾಡಬಲ್ಲದು.

–ಎಂ.ಎಸ್.ಉಷಾ ಪ್ರಕಾಶ್, ಮೈಸೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.