ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ ಆಗುತ್ತಿರುವುದು ಒಂದು ಕಡೆಯಾದರೆ, ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಡೆಲ್ಟಾಪ್ಲಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ನಮಗೆ ಎಚ್ಚರಿಕೆಯ ಗಂಟೆ ಎಂದು ಭಾವಿಸಬೇಕು. ಜನರು ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಪರಸ್ಪರ ಅಂತರ ಪಾಲಿಸುವುದು, ಮಾಸ್ಕ್ ಧರಿಸುವುದು, ಸ್ವಚ್ಛತೆ, ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳುವುದು, ಅನಗತ್ಯವಾಗಿ ಓಡಾಡದೆ ಕೋವಿಡ್ ಶಿಷ್ಟಾಚಾರವನ್ನು ಕಡ್ಡಾಯವಾಗಿ ಪಾಲಿಸಲು ಮುಂದಾಗಬೇಕು.
-ಚನ್ನಕೇಶವ ಜಿ.ಕೆ., ತರೀಕೆರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.