ADVERTISEMENT

ವಾಚಕರ ವಾಣಿ: ದೇವರ ಪ್ರತಿನಿಧಿಗಳೇನಲ್ಲ...

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 18 ಮೇ 2022, 19:45 IST
Last Updated 18 ಮೇ 2022, 19:45 IST

ಕಾಮಗಾರಿಯ ಬಿಲ್‌ ಬಿಡುಗಡೆಗೆ ಸಂಬಂಧಿಸಿದ ಚರ್ಚೆಗಾಗಿ ಕರೆದಿದ್ದ ಸಭೆಯಲ್ಲಿ ಪಾಲ್ಗೊಳ್ಳದ ಕಾರಣಕ್ಕೆ ಮುಖ್ಯ ಎಂಜಿನಿಯರ್‌ ಒಬ್ಬರನ್ನು ದೇವದುರ್ಗದ ಶಾಸಕ ಕೆ.ಶಿವನಗೌಡ ನಾಯಕ ಅವರು 7 ತಿಂಗಳ ಹಿಂದೆ ಅವಾಚ್ಯವಾಗಿ ನಿಂದಿಸಿದ್ದರು ಎನ್ನಲಾದ ವಿಡಿಯೊವೊಂದು ಈಗ ವೈರಲ್‌ ಆಗಿದೆ. ಶಾಸಕರು ಅಧಿಕಾರಿಯನ್ನು ಹೀಗೆ ಅವಮಾನಿಸಿ ಕಾರ್ಯಾಂಗ ವ್ಯವಸ್ಥೆಯನ್ನೇ ನಗೆಪಾಟಲಿಗೆ ಈಡುಮಾಡಿದ್ದಾರೆ.

ಜನಪ್ರತಿನಿಧಿಗಳು ದೇವರ ಪ್ರತಿನಿಧಿಗಳೇನಲ್ಲ. ಸರ್ಕಾರಿ ನೌಕರರು ಅವರ ಮನೆಯ ಜೀತದಾಳುಗಳಲ್ಲ. ಅವರಿಗೂ ಹುದ್ದೆಗೆ ಅನುಗುಣವಾಗಿ ಸಮಾಜದಲ್ಲಿ ಗೌರವ ಇರುತ್ತದೆ. ಸಾರ್ವಜನಿಕರ ಸಮ್ಮುಖದಲ್ಲಿ ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದಾಕ್ಷಣ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಬಿಡುವುದಿಲ್ಲ.

-ವಿ.ಜಿ.ಇನಾಮದಾರ, ಸಾರವಾಡ, ವಿಜಯಪುರ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.