ADVERTISEMENT

ವಾಚಕರ ವಾಣಿ | ಸದವಕಾಶ ಕಳೆದುಕೊಂಡ ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 19:30 IST
Last Updated 3 ಆಗಸ್ಟ್ 2020, 19:30 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ   

ಕೊರೊನಾ ಸೋಂಕಿಗೆ ಒಳಗಾಗಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಡೆ ಮೂಲಕ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರಲ್ಲಿ ವಿಶ್ವಾಸಾರ್ಹತೆ ಮೂಡಿಸುವಂತಹ ಸುವರ್ಣ ಅವಕಾಶವನ್ನು ಅವರು ಕಳೆದುಕೊಂಡಿದ್ದಾರೆ. ಸ್ವತಃ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ, ಸರ್ಕಾರಿ ಸೇವೆಗಳ ಬಗ್ಗೆ ಜನರ ನಂಬಿಕೆಯನ್ನು ಅವರು ಇಮ್ಮಡಿಗೊಳಿಸಬಹುದಿತ್ತು.

ಒಬ್ಬ ಮುಖ್ಯಮಂತ್ರಿಗೆ ತನ್ನ ನೇತೃತ್ವದಲ್ಲಿ ನಡೆಯುವ ಸಂಸ್ಥೆಗಳ ಬಗ್ಗೆಯೇ ನಂಬಿಕೆ ಇಲ್ಲದೇ ಹೋದರೆ ಇನ್ನು ಪ್ರಜೆಗಳು ಅವುಗಳನ್ನು ಹೇಗೆ ನಂಬುತ್ತಾರೆ? ಸರ್ಕಾರಿ ಆಸ್ಪತ್ರೆಗಳು ನಂಬಲು ಅರ್ಹವಲ್ಲ ಎನ್ನುವುದಾದರೆ, ಆಸ್ಪತ್ರೆಗಳನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸಲಿ. ಬಡ ಬೋರೇಗೌಡನ ಸುಂಕದ ಹಣದಲ್ಲಿ ರಾಜಕಾರಣಿಗಳಿಗೆ ವಿಶೇಷ ಸೌಲಭ್ಯ ಸಲ್ಲದು.

-ಶಿವಕುಮಾರ್ ಎಚ್‌.ಎನ್‌., ನಂಜನಗೂಡು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.