ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್ (ಆರ್ಆರ್ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡನ್ನೂ ಈ ಬಾರಿ ಕನ್ನಡದಲ್ಲಿ ಬರೆಯಲು ಅವಕಾಶ ದಕ್ಕಿರುವುದು ಸ್ವಾಗತಾರ್ಹ. ಇದರಿಂದ, ಕನ್ನಡ ಮಾಧ್ಯಮದಲ್ಲಿ ಓದಿದ ಗ್ರಾಮೀಣ ಪ್ರತಿಭೆಗಳಿಗೆ ಧೈರ್ಯವಾಗಿ ಬ್ಯಾಂಕ್ ಪರೀಕ್ಷೆ ಎದುರಿಸುವ ಮನೋಬಲ ಬರುತ್ತದೆ.
ಈ ಪರೀಕ್ಷೆಗೆ ಸಂಬಂಧಪಟ್ಟ ಪಠ್ಯಪುಸ್ತಕಗಳು ಅಭ್ಯರ್ಥಿಗಳ ಕೈ ಸೇರುವಂತಾಗಬೇಕು. ಸಂಬಂಧಪಟ್ಟ ಆನ್ಲೈನ್ ತರಗತಿಗಳು ನಡೆದರೆ ಅನುಕೂಲವಾಗುತ್ತದೆ. ಹೀಗೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನೂ ಕನ್ನಡದಲ್ಲಿ ನಡೆಸಲು ಮುಂದಾದರೆ ಗ್ರಾಮೀಣ ವಿದ್ಯಾರ್ಥಿಗಳೂ ಎಲ್ಲರಂತೆ ಎಲ್ಲ ಕ್ಷೇತ್ರಗಳಲ್ಲೂ ಸಮಾನ ನೆಲೆಯಲ್ಲಿ ಸ್ಪರ್ಧಿಸಲು
ಸಾಧ್ಯವಾಗುತ್ತದೆ.⇒ಎಂ.ಎಸ್.ಉಷಾ ಪ್ರಕಾಶ್,ಮೈಸೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.